ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಅಲಿಘಡ್​ ವಿವಿ ಪ್ರಾಧ್ಯಾಪಕನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಧಾರ್ಮಿಕ ಭಾವನೆಗಳಿಗೆ ಧಕ್ಕೆಮಾಡಿರುವ ಆರೋಪ ಎದುರಿಸುತ್ತಿರುವ ಉತ್ತರಪ್ರದೇಶದ ಅಲಿಘಡ್​ ಮುಸ್ಲಿಂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜೀತೇಂದ್ರ ಕುಮಾರ್​ಗೆ ನಿರೀಕ್ಷಣಾ ಜಾಮೀನು ನೀಡಲು ಅಲಿಘಡ್​ ಜಿಲ್ಲಾ ನ್ಯಾಯಾಲಯ ನಿರಾಕರಿಸಿದೆ.
ಜವಾಹರ್​ಲಾಲ್​​ ನೆಹರೂ ಮೆಡಿಕಲ್​ ಕಾಲೇಜಿನ ಎಂಬಿಬಿಎಸ್​ ವಿದ್ಯಾರ್ಥಿಗಳಿಗೆ ಏ.5ರಂದು ಪುರಾಣದಲ್ಲಿನ ನಿದರ್ಶನ ನೀಡಿ ಡಾ.ಜೀತೇಂದ್ರ ಪಾಠ ಮಾಡಿದ್ದರು ಎನ್ನಲಾಗ್ತಿದೆ. ಈ ಸಂಬಂಧ ಈಗಾಗಲೇ ಇವರನ್ನು ವಿಶ್ವವಿದ್ಯಾಲಯವು ಸೇವೆಯಿಂದ ಅಮಾನತು ಮಾಡಿದ್ದು, ಅಲ್ಲದೇ, ಕಾರಣ ಕೇಳಿ ಶೋಕಾಸ್​ ನೋಟಿಸ್​ ಸಹ ಜಾರಿ ಮಾಡಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಡಾ. ಜೀತೇಂದ್ರ ವಿರುದ್ಧ ಬಿಜೆಪಿ ಮುಖಂಡ ನಿಶೀತ್​ ಶರ್ಮಾ ದೂರು ದಾಖಲಿಸಿದ್ದಾರೆ. ಹೀಗಾಗಿ ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​​ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯವು ಪ್ರಾಧ್ಯಾಪಕನ ಅರ್ಜಿಯನ್ನು ತಿರಸ್ಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!