ಹೊಸದಿಗಂತ ಡಿಜಿಟಲ್ ಡೆಸ್ಕ್
ಧಾರ್ಮಿಕ ಭಾವನೆಗಳಿಗೆ ಧಕ್ಕೆಮಾಡಿರುವ ಆರೋಪ ಎದುರಿಸುತ್ತಿರುವ ಉತ್ತರಪ್ರದೇಶದ ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜೀತೇಂದ್ರ ಕುಮಾರ್ಗೆ ನಿರೀಕ್ಷಣಾ ಜಾಮೀನು ನೀಡಲು ಅಲಿಘಡ್ ಜಿಲ್ಲಾ ನ್ಯಾಯಾಲಯ ನಿರಾಕರಿಸಿದೆ.
ಜವಾಹರ್ಲಾಲ್ ನೆಹರೂ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಏ.5ರಂದು ಪುರಾಣದಲ್ಲಿನ ನಿದರ್ಶನ ನೀಡಿ ಡಾ.ಜೀತೇಂದ್ರ ಪಾಠ ಮಾಡಿದ್ದರು ಎನ್ನಲಾಗ್ತಿದೆ. ಈ ಸಂಬಂಧ ಈಗಾಗಲೇ ಇವರನ್ನು ವಿಶ್ವವಿದ್ಯಾಲಯವು ಸೇವೆಯಿಂದ ಅಮಾನತು ಮಾಡಿದ್ದು, ಅಲ್ಲದೇ, ಕಾರಣ ಕೇಳಿ ಶೋಕಾಸ್ ನೋಟಿಸ್ ಸಹ ಜಾರಿ ಮಾಡಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಡಾ. ಜೀತೇಂದ್ರ ವಿರುದ್ಧ ಬಿಜೆಪಿ ಮುಖಂಡ ನಿಶೀತ್ ಶರ್ಮಾ ದೂರು ದಾಖಲಿಸಿದ್ದಾರೆ. ಹೀಗಾಗಿ ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯವು ಪ್ರಾಧ್ಯಾಪಕನ ಅರ್ಜಿಯನ್ನು ತಿರಸ್ಕರಿಸಿದೆ.