August 2, 2026
Sunday, August 2, 2026
spot_img

ಸರ್ವಪಕ್ಷ ಸಭೆ: ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತವೇ ಮುಖ್ಯ ಎಂದ ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌;

ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ನಮಗೆ ರಾಜಕೀಯಕ್ಕಿಂತ ರಾಜ್ಯದ ರೈತರು ಹಾಗೂ ಸಾರ್ವಜನಿಕರ ಹಿತರಕ್ಷಣೆಯೇ ಅತ್ಯಂತ ಮುಖ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೃಢವಾಗಿ ಪ್ರತಿಪಾದಿಸಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶ ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಜಲಸಂಕಷ್ಟದ ಕುರಿತು ಚರ್ಚಿಸಲು ಭಾನುವಾರ ಬೆಂಗಳೂರಿನ ಗೃಹಕಚೇರಿ ‘ಕೃಷ್ಣಾ’ದಲ್ಲಿ ಕರೆದಿದ್ದ ಮಹತ್ವದ ಸರ್ವಪಕ್ಷ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.

ಮುಂದಿನ ವರ್ಷದ ಜೂನ್‌ವರೆಗೆ ಜಲಸಂಗ್ರಹದ ಸವಾಲು

ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಮಳೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದ್ದರೂ, ಮುಂದಿನ ದಿನಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗಬಹುದು. ಈಗ ಮಳೆಯಾಗುತ್ತಿದೆ ನಿಜ, ಆದರೆ ಮುಂಬರುವ ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ವರ್ಷದ ಜೂನ್ ತಿಂಗಳವರೆಗೆ ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗಳಿಗೆ ನೀರನ್ನು ಸಂಗ್ರಹಿಸಿ ಕಾಪಾಡಿಕೊಳ್ಳುವುದು ನಮಗೆ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಅತ್ಯಂತ ಜವಾಬ್ದಾರಿಯುತವಾಗಿ ಹೆಚ್ಷೆ ಇಡಲಿದೆ, ಎಂದು ಸಿಎಂ ಸಭೆಗೆ ಮನವರಿಕೆ ಮಾಡಿಕೊಟ್ಟರು.

ಇದನ್ನೂ ಓದಿ:

ರಾಜ್ಯದ ನೆಲ-ಜಲ ರಕ್ಷಣೆಗೆ ವಿರೋಧ ಪಕ್ಷಗಳ ಸಾಥ್

ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ, ಸಚಿವರಾದ ರಾಮಲಿಂಗಾ ರೆಡ್ಡಿ, ಶ್ರೀ ಕೃಷ್ಣ ಬೈರೇಗೌಡ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ನವದೆಹಲಿಯ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸತ್ ಸದಸ್ಯ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಆರ್‌. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಬಿ.ಕೆ.ಹರಿಪ್ರಸಾದ್, ನಿವೃತ್ತ ನ್ಯಾಯಾಧೀಶರಾದ ನಾಗಮೋಹನದಾಸ್, ಅಡ್ವೋಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ, ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಅಪರ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !