ಮೋದಿ ಸರಕಾರದಿಂದ ಎಲ್ಲಾ ಸಮಾಜದ ಅಭಿವೃದ್ಧಿ : ಜಗದೀಶ ಶೆಟ್ಟರ

 ಹೊಸದಿಗಂತ ವರದಿ, ಹುಬ್ಬಳ್ಳಿ:

ಬಿಜೆಪಿ ಸರ್ಕಾರ ಸಣ್ಣ ಸಣ್ಣ ಸಮಾಜದ ಮುಖಂಡ ಗುರುತಿಸಿ ಉತ್ತಮವಾದ ಸ್ಥಾನ ಮಾನ ನೀಡುತ್ತಿದೆ. ಪ್ರಧಾನಿ ಮೋದಿಯವರು ಎಲ್ಲ ಸಮಾಜದ ಒಗ್ಗೂಡಿಸಿ ಸಮಾಜದಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ನಗರದ ಹೊಸಕಿಲ್ಲಾದಲ್ಲಿರುವ ದಿ ದೈವಜ್ಞ ಬ್ರಾಹ್ಮಣ ಸುವರ್ಣಕಾರ ಕೋ ಆಪ್ ಕ್ರೆಡಿಟ್ ಸೂಸೈಟಿ ಲಿಮಿಟೆಡ್‌ನ ನೂತನ ಕಟ್ಟಡವನ್ನು ಬುಧವಾರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ಯಾವತ್ತಿದ್ದರು ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದವರಿಗೆ ಒಳ್ಳೆಯ ಸ್ಥಾನ ಮಾನ ನೀಡುತ್ತಾ ಬಂದಿದೆ. ಅದಕ್ಕಾಗಿ ಈ ಸಮಾಜದ ಪೂಜಾ ಶೇಜವಾಡಕರ ಹು-ಧಾ ಮಹಾನಗರ ಪಾಲಿಕೆಯ ಸದಸ್ಯರಾಗಿದ್ದಾರೆ. ಅವರ ಪತಿ ಸತೀಶ ಶೇಜವಾಡಕ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಹಲವಾರು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ದೈವಜ್ಞ ಬ್ರಾಹ್ಮಣ ಸುವರ್ಣಕಾರ ಕೋ ಆಪ್ ಕ್ರೆಡಿಟ್ ಸೊಸೈಟಿಯು ಸಮಾಜದ ಸಂಘಟನೆಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಎಲ್ಲ ಸಮಾಜದ ಬಂಧುಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಮಾಜ ಮುಖಿ ಕಾರ್ಯ ಮಾಡುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!