ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಕೇಸ್ ನಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ಧರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬೇನಾಮಿ ಆಸ್ತಿ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿಂದ ಸ್ನೇಹಮಯಿ ಕೃಷ್ಣ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬಸ್ಥರು ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಮೈಸೂರು ತಾಲ್ಲೂಕಿನ ಆಲನಹಳ್ಳಿಯಲ್ಲಿ ಸರ್ವೆ ನಂ.113/4ರಲ್ಲಿ 1 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಇದು ಬೇನಾಮಿ ಆಸ್ತಿಯಾಗಿದೆ. ಈ ಕುರಿತಂತೆ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಲಾಗಿದೆ.