ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪ: ಶಾಸಕ ಉದಯ್ ಗರುಡಾಚಾರ್​ಗೆ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ.

3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಜಾಮೀನು ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. 25,000 ರೂಪಾಯಿ ಬಾಂಡ್, ಶ್ಯೂರಿಟಿ ಒದಗಿಸಲು ನ್ಯಾಯಾಧೀಶ ಜೆ.ಪ್ರೀತ್​ ಸೂಚನೆ ನೀಡಿದ್ದಾರೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಬೆಂಗಳೂರಿನ ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್​ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು(ಅಕ್ಟೋಬರ್. 13) ಆದೇಶ ಹೊರಡಿಸಿತ್ತು,

ಮೆವರಿಕ್ ಹೋಲ್ಡಿಂಗ್ಸ್ ನಲ್ಲಿ ಎಂಡಿ ಯಾಗಿದ್ದರೂ ಹೂಡಿಕೆದಾರ ಎಂದು ನಮೂದಿಸಿದ್ದರು ಹಾಗೂ ಪತ್ನಿ ನಿರ್ದೇಶಕರಾಗಿರುವುದನ್ನು ನಮೂದಿಸದ ಆರೋಪ. ಪತ್ನಿಯ ಬ್ಯಾಂಕ್ ವಿವರ ನೀಡದೇ ಮುಚ್ಚಿಟ್ಟ ಆರೋಪ. ಈ ಹಿನ್ನೆಲೆ ಹೆಚ್.ಜಿ.ಪ್ರಶಾಂತ್ ಅವರು ದೂರು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!