ಜೀವ ಬೆದರಿಕೆ ಆರೋಪ: ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ​ ಸೇರಿ ಮೂವರ ವಿರುದ್ಧ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್​ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಈ ವೇಳೆ ಆನಂದ ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿಬಂದಿತ್ತು. ಈ ಕುರಿತು ಪರಶುರಾಮ ದಾವಣಗೆರೆ ಎಂಬುವರು ಅರ್ಜಿ ಸಲ್ಲಿಸಿದ್ದರು. ಬಳಿಕ ಈ ಅರ್ಜಿಯನ್ನು ಹಿಂಪಡೆಯುವಂತೆ ಹೇಳಿ, ಉಪ ಮೇಯರ್ ಮೇಯ‌ರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿನ್ನಲೆ 4 ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪರಶುರಾಮ ದೂರು ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!