March 23, 2026
Monday, March 23, 2026
spot_img

ಮಹಿಳಾ IPS ಅಧಿಕಾರಿಗೆ ಬೆದರಿಕೆ ಆರೋಪ: ವಿಡಿಯೋ ವೈರಲ್ ಬೆನ್ನಲ್ಲೇ ಅಜಿತ್ ಪವಾರ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಸೋಲಾಪುರದಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಹೋದ ಮಹಿಳಾ ಐಪಿಎಸ್ ಅಂಜನಾ ಕೃಷ್ಣ ಅವರಿಗೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬೆದರಿಕೆ ಹಾಕಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ತನಿಖೆಯ ವೇಳೆ ಗ್ರಾಮಸ್ಥರು ಮತ್ತು ಅಧಿಕಾರಿಗಳ ನಡುವೆ ಜಟಾಪಟಿ ಉಂಟಾಯಿತು. ಈ ಸಂದರ್ಭದಲ್ಲಿ ಎನ್‌ಸಿಪಿ ಕಾರ್ಯಕರ್ತ ಬಾಬಾ ಜಗತಾಪ್, ಅಜಿತ್ ಪವಾರ್‌ಗೆ ಕರೆ ಮಾಡಿ ಫೋನ್ ಅನ್ನು ಅಂಜಲಿ ಕೃಷ್ಣ ಅವರಿಗೆ ನೀಡಿದರು. “ಕೇಳಿ, ನಾನು ಉಪಮುಖ್ಯಮಂತ್ರಿ ಮಾತನಾಡುತ್ತಿದ್ದೇನೆ ಮತ್ತು ಅದನ್ನು ನಿಲ್ಲಿಸಲು ನಿಮಗೆ ಆದೇಶ ನೀಡುತ್ತಿದ್ದೇನೆ” ಎಂದಿದ್ದಾರೆ. “ನಿನಗೆ ಎಷ್ಟು ಧೈರ್ಯ? ನಾನು ನಿನ್ನ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಕನಿಷ್ಠ ಪಕ್ಷ ನನ್ನ ಮುಖವನ್ನಾದರೂ ನೀನು ಗುರುತಿಸುತ್ತೀಯ ಅಲ್ವಾ?” ಎಂದು ಅವರು ಕೇಳಿದ್ದಾರೆ. ಇದಾದ ಬಳಿಕ, ಪವಾರ್ ವಿಡಿಯೋ ಕರೆಗೆ ಬದಲಾಯಿಸಿ ಅಂಜಲಿ ಕೃಷ್ಣ ಅವರ ಜೊತೆ ನೇರವಾಗಿ ಮಾತನಾಡಿದ್ದಾರೆ. ರಸ್ತೆ ನಿರ್ಮಾಣಕ್ಕೆ ಬಳಸುವ ಮರಮ್‌ನ ಕಾನೂನುಬಾಹಿರ ಗಣಿಗಾರಿಕೆಯ ವಿರುದ್ ಕ್ರಮ ಕೈಗೊಳ್ಳುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ಸಂಪೂರ್ಣ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ವಿವಾದವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ

ಇದೀಗ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಲಾಪುರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗಿನ ನನ್ನ ಮಾತುಕತೆಗೆ ಸಂಬಂಧಿಸಿದ ಕೆಲವು ವೀಡಿಯೊಗಳತ್ತ ನನ್ನ ಗಮನ ಸೆಳೆಯಿತು. ಕಾನೂನು ಜಾರಿಯಲ್ಲಿ ಹಸ್ತಕ್ಷೇಪ ಮಾಡುವುದು ನನ್ನ ಉದ್ದೇಶವಲ್ಲ, ಆದರೆ ನೆಲದ ಮೇಲಿನ ಪರಿಸ್ಥಿತಿ ಶಾಂತವಾಗಿರುವುದನ್ನು ಮತ್ತು ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳುವುದು ನನ್ನ ಉದ್ದೇಶವಾಗಿತ್ತು ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ನನ್ನ ಪೊಲೀಸ್ ಪಡೆ ಮತ್ತು ಅದರ ಅಧಿಕಾರಿಗಳ ಬಗ್ಗೆ ನನಗೆ ಅಪಾರ ಗೌರವವಿದೆ. ನಾನು ಕಾನೂನಿನ ನಿಯಮವನ್ನು ಎಲ್ಲಕ್ಕಿಂತ ಹೆಚ್ಚಾಗಿ ಪಾಲಿಸುತ್ತೇನೆ. ಪಾರದರ್ಶಕ ಆಡಳಿತಕ್ಕೆ ಮತ್ತು ಮರಳು ಗಣಿಗಾರಿಕೆ ಸೇರಿದಂತೆ ಪ್ರತಿಯೊಂದು ಕಾನೂನುಬಾಹಿರ ಚಟುವಟಿಕೆಯನ್ನು ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ನಿಭಾಯಿಸುವುದನ್ನು ಖಚಿತಪಡಿಸಿಕೊಳ್ಳಲು ನಾನು ದೃಢವಾಗಿ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !