ಮಹಿಳೆಯ ಮೇಲೆ ಅತ್ಯಾಚಾರದ ಆರೋಪ: ತೆಲಂಗಾಣ ಕಾಂಗ್ರೆಸ್‌ ಮುಖಂಡನ ಮೇಲೆ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿವಾಹದ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿ ವಿರುದ್ಧ ಹೈದರಾಬಾದ್‌ನ ಪುಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿವಕುಮಾರ್ ರೆಡ್ಡಿ ಮದ್ಯ ಸೇವಿಸಿ, ನಗರದ ಹೋಟೆಲ್‌ನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಬ್ಲಾಕ್‌ಮೇಲ್ ಮಾಡಲು ಈ ಕೃತ್ಯವನ್ನು ರೆಕಾರ್ಡ್‌ ಮಾಡಿದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ತಾನೊಬ್ಬ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಸದಸ್ಯೆಯಾಗಿದ್ದು 2020ರಲ್ಲಿ ಮುನ್ಸಿಪಲ್ ಚುನಾವಣೆಗಳ ಪ್ರಚಾರ ಮಾಡಲು ಮತ್ತು ಸಂಘಟಿಸಲು ತನಗೆ ಜವಾಬ್ದಾರಿ ನೀಡಿದ್ದರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

”ನನಗೆ ನಾರಾಯಣಪೇಟೆ ಕ್ಷೇತ್ರ ಮಂಜೂರಾಗಿದ್ದು, ಈ ಉದ್ದೇಶಕ್ಕಾಗಿಯೇ ನಾರಾಯಣಪೇಟೆಗೆ ತೆರಳಿದ್ದೆ. ನಾರಾಯಣಪೇಟೆಗೆ ಆಗಮಿಸಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕುಂಬಂ ಶಿವಕುಮಾರ್‌ ರೆಡ್ಡಿ ಅವರನ್ನು ಭೇಟಿ ಮಾಡಿದ್ದೆ, ಅವರು ಆಗಲೇ ನನ್ನ ಹತ್ತಿರ ಬರಲು ಯತ್ನಿಸಿದ್ದರು, ನಂತರ ಅಸಂಬದ್ಧ ಸಂದೇಶಗಳನ್ನು ಕಳಿಸುತ್ತಿದ್ದರು. ಕೊನೆಗೊಂದು ಸಂದರ್ಭದಲ್ಲಿ ಮದುವೆ ಇಂಗಿತವನ್ನು ವ್ಯಕ್ತಪಡಿಸಿದರು” ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಅವರ ಅಸ್ತಿತ್ವದಲ್ಲಿರುವ ಮದುವೆಯ ಬಗ್ಗೆ ಅವರು ಅವರನ್ನು ಪ್ರಶ್ನಿಸಿದಾಗ, ಕಾಂಗ್ರೆಸ್ ಅಧ್ಯಕ್ಷರು ಅವರ ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಮೂರು ವರ್ಷಗಳಿಗಿಂತ ಹೆಚ್ಚು ಬದುಕುಳಿಯುವುದಿಲ್ಲ ಮತ್ತು ಆದ್ದರಿಂದ ಅವರನ್ನು ನೋಡಿಕೊಳ್ಳುವ ಮಹಿಳೆಯ ಅಗತ್ಯವಿದೆ ಎಂದು ಉತ್ತರಿಸಿದ್ದರು.

ಅವರು ದುಬ್ಬಾಕ ಜಿಲ್ಲೆಯಲ್ಲಿ ತಂಗಿದ್ದಾಗ, ಶಿವಕುಮಾರ್ ರೆಡ್ಡಿ ಕುಡಿದ ಸ್ಥಿತಿಯಲ್ಲಿ ಮಹಿಳೆಯ ಕೋಣೆಗೆ ಬಂದು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆ ನಿರಾಕರಿಸಿದಾಗ ಅವಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!