ಉಮಾಪತಿಗೆ ಬೆದರಿಕೆ ಆರೋಪ: ನಟ ದರ್ಶನ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿರ್ಮಾಪಕ ಉಮಾಪತಿ ವಿರುದ್ಧ ನಟ ದರ್ಶನ್ ನೀಡಿರುವ ಹೇಳಿಕೆ ಸಂಬಂಧ ಫಿಲಂಚೇಂಬರ್ ಗೆ ದೂರು ನೀಡಲಾಗಿದೆ.

ಪ್ರಜಾಪರ ವೇದಿಕೆ ಕಾರ್ಯಕರ್ತರು ಫಿಲಂಚೇಂಬರ್ ಗೆ ದೂರು ನೀಡಿದ್ದು, ನಟ ದರ್ಶನ್ ಗುಮ್ಮಿಸ್ಕೊತಿಯಾ ಎಂದು ಹೇಳುವ ಮೂಲಕ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದಾರೆ, ಅವರು ಕ್ಷಮೆಯಾಚಿಸಬೇಕು ಎಂದುದೂರು ದಾಖಲಿಸಿದೆ.

‘ಕಾಟೇರ’ ಕಥೆ ಹೇಳಿದ್ದು ನಾನು, ಟೈಟಲ್ ಕೊಟ್ಟಿದ್ದು ನಾನು ಎಂದು ಉಮಾಪತಿ ಹೇಳಿದ್ದರು. ಇದಕ್ಕೆ ದರ್ಶನ್ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್ ….ಯಾಕಪ್ಪಾ..ಬಂದು ಬಂದು ನನ್ನ ಹತ್ತಿರನೇ ಗುಮ್ಮಿಸಿಕೊಳ್ತೀಯಾ..? “ಕೆಲವರು ಕಥೆ ನಾನು ಮಾಡಿಸಿದೆ. ಟೈಟಲ್ ನಾನು ಕೊಟ್ಟೆ ಅಂತ ಹೇಳ್ತಿದ್ದಾರೆ..? ಅಯ್ಯೋ ತಗಡೇ, ನಿನಗೆ ‘ರಾಬರ್ಟ್’ ಕಥೆ ಕೊಟ್ಟಿದ್ದೇ ನಾವು, ಟೈಟಲ್ ಕೊಟ್ಟಿದ್ದೇ ನಾನು ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.ನೀನು ಕಥೆ ಮಾಡಿಸಿದೆ ಅಲ್ವಾ? ಹಾಗಾದ್ರೆ ಇಂತಹ ಒಳ್ಳೆ ಕಥೆ ಯಾಕೆ ಬಿಟ್ಟೆ? ನಿನ್ನ ಜಡ್ಜ್ಮೆಂಟ್ ಅಷ್ಟು ಚೆನ್ನಾಗಿದೆ ಅಂದರೆ ನೀನು ಮಾಡಬಹುದಿತ್ತಲ್ಲ..ಸುಮ್ಮನೆ ಮಾತನಾಡಬಾರದು….ಆಧಾರ ಇಟ್ಟುಕೊಂಡು ಮಾತನಾಡಬೇಕು..ಎಂದು ನಟ ದರ್ಶನ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!