ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಭೇಟಿಗೆ ಅವಕಾಶ ಕೊಡಿ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಧರಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಅಧಿಕಾರಿಯಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಅಪ್ರಾಪ್ತ ಬಾಲಕಿಯನ್ನು ಭೇಟಿ ಮಾಡಲು ಅವಕಾಶ ನೀಡಿ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಪಟ್ಟು ಹಿಡಿದಿದ್ದಾರೆ.

ಬಾಲಕಿಯನ್ನು ದೆಹಲಿಯ ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯನ್ನು ಭೇಟಿ ಮಾಡಲು ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವಕಾಶ ಕೋರಿದ್ದರು. ಆದರೆ ಆಕೆಯ ಭೇಟಿ ನಿರಾಕರಿಸಲಾಗಿದೆ.

ಇದರಿಂದಾಗಿ ಸ್ವಾತಿ ಧರಣಿ ಕೂತಿದ್ದು, ಇಂದು ಕೂಡ ಧರಣಿ ಮುಂದುವರಿಸಿದ್ದಾರೆ. ಸಂತ್ರಸ್ತೆ ಹಾಗೂ ಆಕೆಯ ತಾಯಿ ಯಾರನ್ನೂ ಭೇಟಿಯಾಗಲು ಬಯಸುತ್ತಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿನ್ನೆ ಬೆಳಗ್ಗೆ ಸ್ವಾತಿ ಆಸ್ಪತ್ರೆ ಬಳಿ ಬಂದಿದ್ದಾರೆ. ಪೊಲೀಸರು ಭೇಟಿಗೆ ಅವಕಾಶ ಕೊಡದ ಹಿನ್ನೆಲೆ ಇಡೀ ದಿನ ಸ್ವಾತಿ ಕಾದಿದ್ದಾರೆ. ಇಂದು ಕೂಡ ಧರಣಿ ಮುಂದುವರಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮೋದಯ್ ಖಾಖಾ ಬಾಲಕಿಯ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದು, ಗರ್ಭಪಾತದ ಮಾತ್ರೆಯನ್ನು ನುಂಗಿಸಿದ್ದರು ಎನ್ನುವ ಆರೋಪವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!