ಪ್ರತಿಕೂಲ ಹವಾಮಾನದಿಂದಾಗಿ ಮೂರನೇ ದಿನವೂ ಸ್ಥಗಿತಗೊಂಡ ಅಮರನಾಥ ಯಾತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆಯನ್ನು ಸತತ ಮೂರನೇ ದಿನವೂ ಸ್ಥಗಿತಗೊಳಿಸಲಾಗಿದೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಿದ್ದರಿಂದ ಅಧಿಕಾರಿಗಳು ಭಾನುವಾರ ಜಮ್ಮು ಬೇಸ್ ಕ್ಯಾಂಪ್‌ನಲ್ಲಿ ಭಕ್ತರ ಗುಂಪನ್ನು ತಡೆದರು.

ಯಾತ್ರೆಯನ್ನು ಸ್ಥಗಿತಗೊಳಿಸಿದ ನಂತರ, 6,000 ಅಮರನಾಥ ಯಾತ್ರಾರ್ಥಿಗಳು ರಾಂಬನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರನಾಥ ಗುಹೆಯಿಂದ ಆರು ಕಿಮೀ ದೂರದಲ್ಲಿರುವ ಪಂಚತಾರ್ಣಿಯಲ್ಲಿ ಕರ್ನಾಟಕದ ಕನಿಷ್ಠ 80 ಜನರು ಸಿಲುಕಿಕೊಂಡಿರುವುದಾಗಿ ಕರ್ನಾಟಕ ಸರ್ಕಾರ ತಿಳಿಸಿದೆ.

ಯಾತ್ರಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಆಡಳಿತವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಡೆಪ್ಯೂಟಿ ಕಮಿಷನರ್ ರಾಂಬನ್ ತಿಳಿಸಿದ್ದಾರೆ. ಭೂಕುಸಿತದಿಂದಾಗಿ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿ (NH44) ರಾಂಬನ್‌ನಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಜುಲೈ 1 ರಂದು ಯಾತ್ರೆ ಆರಂಭವಾದಾಗಿನಿಂದ 67,566 ಯಾತ್ರಾರ್ಥಿಗಳು ಅಮರನಾಥ ಗುಹಾ ದೇಗುಲಕ್ಕೆ ಭೇಟಿ ನೀಡಿದ್ದಾರೆ.
62 ದಿನಗಳ ಅವಧಿಯ ಅಮರನಾಥ ಯಾತ್ರೆಯು ಆಗಸ್ಟ್ 31, 2023 ರಂದು ಮುಕ್ತಾಯಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!