ಅಂಬರೀಶ್ ಅವರಿಗೆ ಗೌರವ ಸಿಕ್ಕಿದ್ದು ಒಬ್ಬ ನಾಯಕನಿಂದ ಅಲ್ಲ: HDK ವಿರುದ್ಧ ಸುಮಲತಾ ಗರಂ

ಹೊಸ ದಿಗಂತಹ ಡಿಜಿಟಲ್ ಡೆಸ್ಕ್:

ಅಂಬರೀಶ್ ಮೃತ ದೇಹ ಮಂಡ್ಯಕ್ಕೆ ತಂದ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ವಿರುದ್ಧ ಗರಂ ಆದ ಸಂಸದೆ ಸುಮಲತಾ ತುಂಬಾ ಹೇಸಿಗೆ ಅನಿಸುತ್ತೆ ಕುಮಾರಸ್ವಾಮಿ ಯವರ ಈ ರೀತಿ ಮಾತುಗಳು. ಅಂಬರೀಶ್ ಅವರಿಗೆ ಗೌರವ ಸಿಕ್ಕಿದ್ದು ಒಬ್ಬ ನಾಯಕನಿಂದ ಅಲ್ಲ. ರಾಜ್ಯದ ಜನತೆ ಅವರಿಗೆ ಗೌರವ ಸ್ಥಾನಮಾನ ಕೊಟ್ಟಿರುವುದು. ನಾನೇ ನಾನೇ ಎಂದು ಕುಮಾರಸ್ವಾಮಿ ಹೇಳೋದು ಅವರಿಗೆ ಶೋಭೆ ತರಲ್ಲ ಎಂದರು.

ನಾನು ಅವರಿಗೆ ಏನು ಅನ್ಯಾಯ ಮಾಡಿದ್ದೇನೆ ಎಂದು ಈ ರೀತಿ ದ್ವೇಷ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ದ್ವೇಷ ಮಾಡಿದ್ದು ನಾನಾ, ಅವರ ಎಂದು ಜನ ನೋಡಿಕೊಂಡು ಬಂದಿದ್ದಾರೆ. ಒಂದೊಂದು ದಿನ ಒಂದೊಂದು ಹೇಳಿಕೆ ಕೊಡುವ ಮೂಲಕ ದಾರಿ ತಪ್ಪಿಸಲು ಹೊರಟಿದ್ದಾರೆ. ದ್ವೇಷದ ರಾಜಕಾರಣ ಅವರು ಮತ್ತು ಅವರ ಕಡೆಯವರು ಮಾಡಿಕೊಂಡು ಬಂದಿದ್ದಾರೆ. ಅಂಬರೀಶ್ ಹಾಗೂ ಅವರ ಕುಟುಂಬ ಪ್ರೀತಿಯಿಂದನೇ ಎಲ್ಲರನ್ನ ಗೆದ್ದಿರೋದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!