ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಂಬುಲೆನ್ಸ್ ಅಪಘಾತ: ಗರ್ಭಿಣಿ ಸ್ಥಳದಲ್ಲೇ ಸಾವು

ದಿಗಂತ ವರದಿ ವಿಜಯಪುರ:

ಆಂಬ್ಯುಲೆನ್ಸ್ ಅಪಘಾತದಲ್ಲಿ ಗರ್ಭಿಣಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಮಧ್ಯೆದ ರಸ್ತೆ ಬಳಿ ನಡೆದಿದೆ.

ಭಾಗ್ಯಶ್ರೀ ಪರಣ್ಣನವರ ಮೃತಪಟ್ಟಿರುವ ಗರ್ಭಿಣಿ. ಭಾಗ್ಯಶ್ರೀಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಜಿಲ್ಲೆಯ ತಾಳಿಕೋಟಿಯಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಆಂಬ್ಯುಲೆನ್ಸ್ ರವಾನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಭಾಗ್ಯಶ್ರೀ ಅಸುನೀಗಿದ್ದಾಳೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!