Sunday, December 3, 2023

Latest Posts

ಲಾರಿಗೆ ಡಿಕ್ಕಿಯಾದ ಆಂಬುಲೆನ್ಸ್, ರೋಗಿ ಸ್ಥಳದಲ್ಲೇ ಸಾವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೊಮ್ಮನಹಳ್ಳಿ ಗ್ರಾಮದಲ್ಲಿ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿದ್ದು, ಆಸ್ಪತ್ರೆಗೆ ತೆರಳಬೇಕಿದ್ದ ರೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

40 ವರ್ಷದ ವಿಜಯ್ ಕುಮಾರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು, ಚಿತ್ರದುರ್ಗದ ಕಿದ್ವಾಯಿ ಆಸ್ಪತ್ರೆಗೆ ವಿಜಯ್ ಅವರನ್ನು ಸ್ಥಳಾಂತರಿಸುವ ವೇಳೆ ಅಪಘಾತ ಸಂಭವಿಸಿದ್ದು, ಆಂಬುಲೆನ್ಸ್‌ನಲ್ಲಿ ಇದ್ದ ಇನ್ನೂ ಐವರು ಗಾಯಗೊಂಡಿದ್ದಾರೆ.

ಚಾಲಕ ಹಾಗೂ ವಿಜಯ್ ಕುಟುಂಬದ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!