ಗುಂಡ್ಲುಪೇಟೆಯಲ್ಲಿ ಅಮಿತ್​ ಶಾ ಭರ್ಜರಿ ರೋಡ್​ ಶೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ಚುನಾವಣಾ ಚಾಣುಕ್ಯ ಅಮಿತ್ ಶಾ ಮೊಟ್ಟ ಮೊದಲ ಬಾರಿಗೆ ಗುಂಡ್ಲುಪೇಟೆ ತಾಲೂಕಿಗೆ ಆಗಮಿಸಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್.ನಿರಂಜನಕುಮಾರ್ ಪರ ಪ್ರಚಾರದ ರೋಡ್ ಶೋ ಆರಂಭಿಸದರು.

ಪಟ್ಟಣದ ಡಿ‌.ದೇವರಾಜ ಅರಸು ಕ್ರೀಡಾಂಗಣಕ್ಕೆ ಮಧ್ಯಾಹ 1 ಗಂಟೆ ಸುಮಾರಿಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಕೇಂದ್ರ‌ ಸಚಿವ ಅಮಿತ್ ಶಾ ಮಡಹಳ್ಳಿ ಸರ್ಕಲ್ ವರೆಗೆ ವಾಹನದಲ್ಲಿ ಬಂದು ನಂತರ ಪ್ರಚಾರದ ರಥವೇರಿ ರೋಡ್‌ ಶೋ ಪ್ರಾರಂಭಿಸಿದರು.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ-766ರ ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಅಂಚೆ ಕಚೇರಿ, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಮೂಲಕ ಸಾಗಿ ಹಳೇ ಬಸ್ ನಿಲ್ದಾಣದಲ್ಲಿ ಮುಕ್ತಾಯವಾಯಿತು.

ಹತ್ತು ಸಾವಿರಕ್ಕಿಂತಲೂ ಅಧಿಕ ಕಾರ್ಯಕರ್ತರು ಭಾಗಿ:

ಅಮಿತ್​ ಶಾ ರೋಡ್​ ಶೋನಲ್ಲಿ 10-12 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ಬಿಜೆಪಿಯ ಬಾವುಟ, ನಿರಂಜನಕುಮಾರ್ ಹಾಗೂ ಅಮಿತ್ ಶಾರ ಫೋಟೋ ಪ್ರದರ್ಶನ ಮಾಡಿದರು.

ಅಮಿತ್‌ ಶಾ ಕಂಡು ಕುಣಿದು ಕುಪ್ಪಳಿಸಿದ ವೃದ್ಧ:

ಗುಂಡ್ಲುಪೇಟೆ ಪಟ್ಟಣದಲ್ಲಿನ ರೋಡ್ ಶೋ ನಡೆಸುತ್ತಿರುವ ಅಮಿತ್ ಶಾ ರನ್ನು ಕಂಡ ಖುಷಿಯಲ್ಲಿ
ವೃದ್ಧರೊಬ್ಬರು ಬಿಜೆಪಿ ಬಾವುಟ ಹಿಡಿದು ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಜೊತೆಗೆ ಪ್ರಧಾನ ಮಂತ್ರಿ
ನರೇಂದ್ರ ಮೋದಿ, ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಹಾಗೂ ಶಾಸಕ ನಿರಂಜನಕುಮಾರ್ ಪರ ಘೋಷಣೆಗಳು ಮೊಳಗಿದವು.

ಈ ವೇಳೆ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಈ ಬಾರಿ ಕಮಲ ಅರಳಲಿದೆ. ಗುಂಡ್ಲುಪೇಟೆ ಅಭ್ಯರ್ಥಿ ನಿರಂಜನಕುಮಾರ್ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ
ಎಂದು ಅಮಿತ್‌ ಶಾ ಮನವಿ ಮಾಡಿದರು.

ರೋಡ್ ಶೋದಲ್ಲಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಡಾ ಅಧ್ಯಕ್ಷ ನಿಜಗುಣರಾಜು, ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್ ಸೇರಿದಂತೆ ಬಿಜೆಪಿ ಪ್ರಮುಖರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!