ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಗೆ ಭಾರತ ಪಾಕ್ ಮೇಲೆ ಪ್ರತೀಕಾರ ಆರಂಭಿಸಿದ್ದು, ಮಧ್ಯರಾತ್ರಿ ಪಾಕ್ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ನಮ್ಮ ಸೈನಿಕರ ಬಗ್ಗೆ ನನಗೆ ಹೆಮ್ಮೆಯಿದೆ, ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ. ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ ಸದಾ ಸಿದ್ಧ ಎಂದು ಟ್ವೀಟ್ ಮಾಡಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಗೆ ಪತ್ರೀಕಾರವಾಗಿ ಇಂದು ತಡರಾತ್ರಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಸೇನಾಯು ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.