ರಾಯ್​ ಬರೇಲಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಸಂಸದರ ನಿಧಿಯಲ್ಲಿ ಶೇ 70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಯ್​ ಬರೇಲಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಗಾಂಧಿ ಕುಟುಂಬವು ಸುಳ್ಳು ಹೇಳುವುದರಲ್ಲಿ ನಿಪುಣರು. ಈ ಕ್ಷೇತ್ರದಿಂದ ಕುಟುಂಬಕ್ಕೆ ಹಲವು ವರ್ಷಗಳಿಂದ ಅವಕಾಶ ನೀಡಿದ್ದೀರಿ. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಕಾಂಗ್ರೆಸ್​ಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಅಭ್ಯರ್ಥಿ ದಿನೇಶ್​ ಪ್ರತಾಪ್​ ಸಿಂಗ್​ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ ಅವರು, ರಾಯ್ ಬರೇಲಿಯನ್ನು ಮೋದಿ ಅವರ ಅಭಿವೃದ್ಧಿ ಪಯಣದಲ್ಲಿ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!