ಬೆಂಗಳೂರಿಗೆ ಅಮಿತ್ ಶಾ: ಅಂದೇ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಎಂದ ಬಿ.ಎಸ್.ಯಡಿಯೂರಪ್ಪ

ಹೊಸದಿಗಂತ ವರದಿ, ಶಿವಮೊಗ್ಗ:

ಬಿಜೆಪಿ ಅಮಿತ್ ಷಾ ಮೇ 2 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅದೇ ವೇಳೆ ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ದೆಹಲಿಗೆ ತೆರಳಿ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ. ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನಗಳನ್ನು ಗಳಿಸುವ ಗುರಿಯನ್ನು ಹೊಂದಲಾಗಿದೆ. ಇದಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಪುನಃ ಜಿಲ್ಲಾ ಪ್ರವಾಸ ನಡೆಸಲಾಗುವುದು. ಆಯಾ ಜಿಲ್ಲೆಯ ಸ್ಥಿತಿಗತಿ ಅಧ್ಯಯನ ಮಾಡಿ ಸಂಘಟನೆ ಬಲಪಡಿಸಲು ಕಾರ್ಯತಂತ್ರ ರೂಪಿಸಲಾಗುವುದು. ಕೇಂದ್ರ ಸರ್ಕಾರದ ಹತ್ತಾರು ಯೋಜನೆಗಳಿಂದ ಪ್ರತಿ ಮನೆಗೂ ಲಾಭವಾಗಿದೆ. ಇದನ್ನು ಮನವರಿಕೆ ಮಾಡಿಕೊಡಲಾಗುವುದು. ಜಿಲ್ಲೆಯ ಭದ್ರಾವತಿಯಲ್ಲೂ ಗೆಲುವಿನ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!