ದಿಗಂತ ವರದಿ ಹಾವೇರಿ:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಹೆಲಿಪ್ಯಾಡ್ ಗೆ ಮಂಗಳವಾರ ಬಂದಿಳಿದರು.
ಅವರನ್ನು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಸಚಿವ ಬಿ.ಸಿ.ಪಾಟೀಲ, ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಬಿಜೆಪಿ ಜಿಲ್ಲಾದ್ಯಕ್ಷ ಅರುಣಕುಮಾರ ಪೂಜಾರ ಮತ್ತಿತರರು ಅದ್ದೂರಿಯಾಗಿ ಸ್ವಾಗತಿಸಿದರು.
ಅಲ್ಲಿಂದ ನೇರವಾಗಿ ಕಾಗಿನೆಲೆ ಕನಕ ಗುರುಪೀಠಕ್ಕೆ ತೆರಳಿದ ನಡ್ಡಾ ಅವರು, ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ಬೊಮ್ಮಾಯಿ ಪರ ಬ್ಯಾಡಗಿಯಲ್ಲಿ ಪ್ರಚಾರದ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸಿದರು.