ರಾಜ್ಯಕ್ಕೆ ಮತ್ತೆ ಅಮಿತ್ ಶಾ ಎಂಟ್ರಿ: ಬಿಜೆಪಿ ಪಾಳಯ ಭರ್ಜರಿ ಸಿದ್ಧತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಸಚಿವ ಅಮಿತ್ ಶಾ (Amit Shah) ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ.‌ ಜ. 25ರಂದು ಬೆಂಗಳೂರಿಗೆ ಒಂದು ದಿನದ ಪ್ರವಾಸ ಹಾಕಿಕೊಂಡಿದ್ದಾರೆ.‌

ಅಮಿತ್ ಶಾ ಕಳೆದ ವರ್ಷ ಡಿ. 29ರಂದು ರಾಜ್ಯಕ್ಕೆ ಬಂದು ಇನ್ನೂ ಒಂದು ತಿಂಗಳಾಗಿಲ್ಲ. ಅಷ್ಟರಲ್ಲಾಗಲೇ ಮತ್ತೊಮ್ಮೆ ಬರುತ್ತಿರುವುದು ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.

ಈ ಬಾರಿ ಕೆಲವು ಅಭಿವೃದ್ಧಿ ಯೋಜನೆಗಳಿಗೆ ಶಾ ಚಾಲನೆ ಕೊಡಲಿದ್ದಾರೆ. ಇದರ ಜತೆಗೆ ರಾಜ್ಯ ಬಿಜೆಪಿಯ ಚುನಾವಣಾ ತಯಾರಿಯ ಅವಲೋಕನ ಮಾಡಲಿದ್ದಾರೆ.

ಅಮಿತ್ ಶಾ ಸ್ವಾಗತಕ್ಕೆ ರಾಜ್ಯ ಬಿಜೆಪಿ ಪಾಳಯ ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!