Thursday, March 23, 2023

Latest Posts

ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಭೇಟಿ: ಪೊಲೀಸ್ ಇಲಾಖೆಯಿಂದ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ದಕ್ಷಿಣ ಕನ್ನಡ ಜಿಲ್ಲಾ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ ಎಲ್ಲ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಸಂದರ್ಭ ಭದ್ರತಾ ಲೋಪ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಅಮಿತ್ ಶಾ ಅವರು ಶನಿವಾರ ಈಶ್ವರಮಂಗಲಕ್ಕೆ ಭೇಟಿ ನೀಡಿ, ಪುತ್ತೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸುವರು.

ಮಂಗಳೂರಿನಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸುವರು. ಈಶ್ವರ ಮಂಗಲ ಹಾಗೂ ಪುತ್ತೂರಿನಲ್ಲಿ ಪಶ್ಚಿಮ ವಲಯ ಡಿಐಜಿ ಡಾ. ಚಂದ್ರಗುಪ್ತ ಅವರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಜತೆಗೆ 11 ಕೆಎಸ್‌ಆರ್‌ಪಿ ತುಕಡಿ, ಒಂದು ಸಾವಿರ ಸಿಬ್ಬಂದಿಯನ್ನು ಭದ್ರತೆಗೆ ನೀಯೋಜಿಸಲಾಗಿದೆ. ಜತೆಗೆ ಹೊರಜಿಲ್ಲೆಯ ಎಸ್ಪಿಗಳು, ಡಿವೈಎಸ್‌ಪಿಗಳು ಆಗಮಿಸಿದ್ದಾರೆ. ಅಗತ್ಯ ಇರುವಲ್ಲಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಬಂದೋಬಸ್ತ್ ನಡೆಸಲಾಗಿದೆ.

ಮಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ನೇತೃತ್ವದಲ್ಲಿ ಬಂದೋಬಸ್ತ್ ನಡೆಸಲಾಗುವುದು. ಗೃಹ ಸಚಿವರ ಭೇಟಿ ಸಂದರ್ಭ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!