ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಸಸ್ ಕೇಂದ್ರ ಬಿಜೆಪಿ ಸರ್ಕಾರ ಎನ್ನುವಂತಾಗಿದೆ ಪರಿಸ್ಥಿತಿ. ಎರಡೂ ಪಕ್ಷಗಳಿಂದ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಗುರುವಾರವಷ್ಟೇ ಸಿಎಂ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಸರಣಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದರು. ಇದೀಗ ಬಿಜೆಪಿ ಸರ್ಕಾರ ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದೆ. ಅಮೃತಕಾಲ Vs ವಿನಾಶಕಾಲ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಲಾಗಿದೆ.
ವಿನಾಶಕಾಲ Vs ಅಮೃತಕಾಲ
ಕಾಂಗ್ರೆಸ್ ಸರ್ಕಾರದ 10 ವರ್ಷಗಳ ಅವಧಿಗೆ (2004-14) ಗೆ ಹೋಲಿಸಿದರೆ ಪ್ರಧಾನಿ ಮೋದಿ ಸರ್ಕಾರದಡಿ ಮೆಟ್ರೋ ರೈಲು, ಬ್ರಾಡ್ಗೇಜ್, ಡಿಬಿಟಿ ಫಲಾನುಭವಿಗಳ ಸಂಖ್ಯೆ ಮತ್ತು ಡಾಟಾ ಬಳಕೆಯಲ್ಲೂ ಗಮನಾರ್ಹ ಹೆಚ್ಚಳವಾಗಿದೆ.
ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯೇ ಪ್ರಧಾನಿ ಶ್ರೀ @narendramodi ಅವರ ಸರ್ಕಾರದ ಆದ್ಯತೆ !… pic.twitter.com/DLFhbg9G7O
— BJP Karnataka (@BJP4Karnataka) February 9, 2024
ಕಾಂಗ್ರೆಸ್ ಸರ್ಕಾರದ ಹತ್ತು ವರ್ಷಗಳ ಅವಧಿಗೆ (2004-2014) ಹೋಲಿಸಿದರೆ, ಪ್ರಧಾನಿ ಮೋದಿ ಅವರ ಸರ್ಕಾರವು ಮೆಟ್ರೋ ರೈಲು, ಬ್ರಾಡ್ಗೇಜ್, ಡಿಬಿಟಿ ಪ್ರಯೋಜನ ಮತ್ತು ಡೇಟಾ ಬಳಕೆಯಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂಬ ಅಂಕಿಅಂಶಗಳನ್ನು ಬಿಜೆಪಿ ಪೋಸ್ಟ್ ಮಾಡಿದೆ. ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಆದ್ಯತೆ! ಎಂಬ ಫೋಟೋ ಸಹಿತ ಅಂಕಿಅಂಶಗಳನ್ನು ಬಿಜೆಪಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ.