ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿಲ್ಲ ಎಂದು ಪಕ್ಷದ ವಿರುದ್ಧ ಪ್ರತಿಭಟಿಸಿದ್ದಲ್ಲದೇ ಹೈಟನ್ಶನ್ ಟವರ್ ಏರಿದ ಆಪ್ ಸದಸ್ಯನೊಬ್ಬ ಆತ್ಮಹತ್ಯೆಯ ಬೆದರಿಕೆ ಒಡ್ಡಿದ ವಿಚಿತ್ರ ಘಟನೆ ನಡೆದಿದೆ. ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ಹಸೀಬ್-ಉಲ್-ಹಸನ್ ಇಂದು ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿರುವ ಹೈಟೆನ್ಷನ್ ವೈರ್ ಟವರ್ ಅನ್ನು ಹತ್ತಿ ಈ ಹೈಡ್ರಾಮಾ ಗೆ ಕಾರಣವಾಗಿದ್ದಾರೆ.
ಮುಂಬರುವ ದೆಹಲಿಯ ಪೌರಾಡಳಿತ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡಲಿಲ್ಲ ಎಂದು ಅವರು ಟವರ್ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ.
ದೆಹಲಿ ಮುನ್ಸಿಪಲ್ ಚುನಾವಣೆಗೆ ಎಎಪಿ ತನ್ನ 134 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ತನ್ನ ಹೆಸರಿಲ್ಲ ಎಂದು ಅವರು ಈ ರೀತಿಯ ಪ್ರತಿಭಟನೆ ಮಾಡಿದ್ದಾರೆ. ಅವರನ್ನು ಕೆಳಗಿಳಿಸಲು ಪಕ್ಷದ ಕಾರ್ಯಕರ್ತರು ಹರಸಾಹಸ ಪಡುತ್ತಿದ್ದಾರೆ.