ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಇಂದು ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಚಾಲನೆಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದ್ದಾರೆ.
ಈ ವೇಳೆ ಆಗಷ್ಟೆ ಹುಟ್ಟಿದ ಅವಳಿ ಮಕ್ಕಳ ಮುಖ ನೋಡಲು ಹೋಗದೆ ಪ್ರಧಾನಿ ಮೋದಿ ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾರ್ಯಕರ್ತನ ನೋಡಿ ಮೋದಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.ಜೊತೆಗೆಇಂತಹ ಸಂದರ್ಭದಲ್ಲಿ ಇಲ್ಲಿಗೆ ಯಾಕೆ ಬಂದಿದ್ದೀರಿ ಎಂದು ಕಾರ್ಯಕರ್ತನ ಪ್ರಶ್ನಿಸಿ, ಅವಳಿ ಮಕ್ಕಳಿಗೆ ಶುಭಹಾರೈಸಿದ್ದಾರೆ.
ಪ್ರಧಾನಿ ಮೋದಿ ಸ್ವಾಗತಿಸಲು ಇತರ ನಾಯಕರ ಜೊತೆ ಬಿಜೆಪಿ ಕಾರ್ಯಕರ್ತ ಅಶ್ವಂತ್ ಪಿಜೈ ಕೂಡ ಆಗಮಿಸಿದ್ದರು. ಮೋದಿ ಸ್ವಾಗತಿಸಲು ಹೊರಡುತ್ತಿದ್ದಂತೆ ಅತ್ತ ಅಶ್ವಂತ್ ಪಿಜೈ ಪತ್ನಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮೋದಿಯನ್ನು ಸ್ವಾಗತಿಸುವ ಅವಕಾಶವನ್ನು ಮಿಸ್ ಮಾಡಿಕೊಳ್ಳಲು ಬಯಸದ ಅಶ್ವಂತ್ ನೇರವಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸ್ವಾಗತ ಮಾಡಿದ್ದಾರೆ.
ಮೋದಿ ಆಗಮಿಸುತ್ತಿದ್ದಂತೆ ನನ್ನ ಪತ್ನಿ ಈಗಷ್ಟೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಇದರ ಜೊತೆಗೆ ನಿಮ್ಮನ್ನು ಸ್ವಾಗತಿಸುವುದು ಮತ್ತಷ್ಟು ಖುಷಿ ನೀಡಿದೆ ಎಂದಿದ್ದಾರೆ. ಈ ಮಾತು ಕೇಳಿದ ಮೋದಿ, ಇಂತಹ ಸಂದರ್ಭದಲ್ಲಿ ನೀವು ಇಲ್ಲಿಗೆ ಬರವು ಬದಲು ಪತ್ನಿ ಜೊತೆ ಇರಬೇಕಿತ್ತು ಎಂದು ಸೂಚಿಸಿದ್ದಾರೆ. ಇಷ್ಟೇ ಅಲ್ಲ ಅವಳಿ ಮಕ್ಕಳು, ಕಾರ್ಯಕರ್ತನ ಪತ್ನಿಗೆ ಶುಭಹಾರೈಸಿದ್ದಾರೆ. ಕಾರ್ಯಕರ್ತನಿಗೆ ಅಭಿನಂದನೆ ಸಲ್ಲಿಸಿದ ಮೋದಿ, ಟ್ವೀಟ್ ಮೂಲಕ ಬಿಜೆಪಿ ಕಾರ್ಯಕರ್ತರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಚೆನ್ನೈ ವಿಮಾನ ನಿಲ್ದಾಣದಲ್ಲಿ ನಮ್ಮ ಕಾರ್ಯಕರ್ತರಲ್ಲಿ ಒಬ್ಬರಾದ ಅಶ್ವಂತ್ ಪಿಜೈ ನನ್ನನ್ನು ಸ್ವಾಗತಿಸಲು ಆಗಮಿಸಿದ್ದರು. ಅವರ ಪತ್ನಿ ಆಗಷ್ಟೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಕಾರ್ಯಕರ್ತ ಅವಳಿ ಮಕ್ಕಳನ್ನು, ಪತ್ನಿಯನ್ನು ಭೇಟಿ ಮಾಡಿರಲಿಲ್ಲ. ಈ ಸಂದರ್ಭದಲ್ಲಿ ಇಲ್ಲಿಗೆ ಬರಬಾರದಿತ್ತು ಎಂದು ನಾನು ಅವರಿಗೆ ಹೇಳಿದೆ. ಜೊತೆಗೆ ಕಾರ್ಯಕರ್ತನ ಕುಟುಂಬಕ್ಕೆ ನನ್ನ ಆಶೀರ್ವಾದ ತಿಳಿಸಿದ್ದೇನೆ. ನಮ್ಮ ಪಕ್ಷದಲ್ಲಿ ಇಂತಹ ಸಮರ್ಪಿತ, ನಿಸ್ವಾರ್ಥ ಮನೋಭಾವದಿಂದ ಕೂಡಿದ ಕಾರ್ಯಕರ್ತರನ್ನು ನೋಡಿದಾಗ ಸಂತೋಷವಾಗುತ್ತಿದೆ. ನಮ್ಮ ಕಾರ್ಯಕರ್ತರ ಪ್ರೀತಿ, ವಾತ್ಸಲ್ಯ ನನ್ನನ್ನು ಭಾವುಕರನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ.
A very special interaction!
At Chennai airport, one of our Karyakartas, Shri Aswanth Pijai Ji was there to welcome me. He told me that his wife had just given birth to twins but he hadn’t met them yet. I told him he shouldn’t have come here and also conveyed my blessings to him… pic.twitter.com/4Oywc2cSPE
— Narendra Modi (@narendramodi) March 4, 2024