ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೈಲರ್ ಕನ್ಹಯ್ಯಾ ಲಾಲ್ ಶಿರಚ್ಛೇದ ಮಾಡಿದ ಆರೋಪಿಗಳನ್ನು ಇಂದು ಜೈಪುರ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆತರುತ್ತಿದ್ದ ವೇಳೆ ಸೇರಿದ್ದ ಆಕ್ರೋಶಿತ ಜನರ ಗುಂಪೊಂದು ಆರೋಪಿಗಳ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಆರೋಪಿಗಳ ಬಟ್ಟೆಯನ್ನು ಹರಿದು ಹಾಕಿದ್ದಾರೆ.
ನಾಲ್ವರು ಆರೋಪಿಗಳ ಪೈಕಿ ನೇರವಾಗಿ ಹತ್ಯೆಯಲ್ಲಿ ಭಾಗಿಯಾದ ಮೊಹಮದ್ ಗೌಸ್ , ರಿಯಾಜ್ ಅಟ್ಟಾರಿ ಹಾಗೂ ಹತ್ಯೆಗೆ ಸಹಾಯ ಮಾಡಿದ ಮೊಹ್ಶಿನ್ ಹಾಗೂ ಆಸಿಫ್ರನ್ನು ವ್ಯಾನ್ನತ್ತ ಕರೆದುಕೊಂಡು ಹೋಗುತ್ತಿದ್ದ ವೇಳೆ ವಕೀಲರು ಹಲ್ಲೆ ಮಾಡಿದ್ದಾರೆ. ಭಾರೀ ಜನಸ್ತೋಮದ ನಡುವೆ ಅವರನ್ನು ಕರೆದುಕೊಂಡು ಬರುವ ವೇಳೆ, ರಿಯಾಜ್ ಹಾಗೂ ಮೊಹಮದ್ರ ಅಂಗಿ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ್ದಾರೆ.
ಆರೋಪಿಗಳನ್ನ ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಲಾಗಿದೆ.