SHOCKING | ತಮಿಳುನಾಡು ಗಡಿ ಬಳಿ ಸಿಕ್ಕ ಸಿಕ್ಕವರ‌ ಮೇಲೆ ಆನೆ ದಾಳಿ, ಇಬ್ಬರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಹೊಸೂರು ಸಮೀಪದ ನಾಟ್ರಾಪಲ್ಲಿ ಬಳಿ ಆನೆಗಳು ಬೀಡುಬಿಟ್ಟಿದ್ದು, ಸಿಕ್ಕಸಿಕ್ಕವರ ಮೇಲೆ ದಾಳಿ ಆನೆ ದಾಳಿ ನಡೆಸಿದೆ.

ದನ ಮೇಯಿಸುತ್ತಿದ್ದ ವ್ಯಕ್ತಿ ಹಾಗೂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಆನೆ ದಾಳಿ ಮಾಡಿದ್ದು, ಇಬ್ಬರೂ ಮೃತಪಟ್ಟಿದ್ದಾರೆ.

ಎಂದಿನಂತೆ ದನ ಮೇಯಿಸಲು ಹೋದ ವ್ಯಕ್ತಿ ಆನೆ ದಾಳಿಗೆ ಮೃತಪಟ್ಟಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಕಾಡಾನೆಗಳ ಉಪಟಳಕ್ಕೆ ಗಡಿ ಗ್ರಾಮ ವಾಸಿಗಳು ಕಂಗಾಲಾಗಿದ್ದು, ಜೀವಭಯದಲ್ಲಿ ಜನ ದಿನಕಳೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!