ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿದ ಯುವತಿಯನ್ನು ಪೋಷಕರೇ ಕತ್ತು ಹಿಸುಕಿ ಕೊಂದಿದ್ದಾರೆ. ಇದರಿಂದ ಮನನೊಂದ ಪ್ರಿಯಕರ ರೈಲಿಗೆ ತಲೆ ಕೊಟ್ಟು ಜೀವನ ಅಂತ್ಯಗೊಳಿಸಿದ್ದಾರೆ. ಕೊಪ್ಪಳದಲ್ಲಿ ಮರ್ಯಾದಾ ಹತ್ಯಾ ನಡೆದಿದ್ದು, ಪೋಷಕರು ಯುವತಿಯ ತಂದೆಯನ್ನು ಬಂಧಿಸಿದ್ದಾರೆ.
ಬೋಡಗುರ್ಕಿ ಗ್ರಾಮದ ಕೀರ್ತಿ ಹಾಗೂ ಗಂಗಾಧರ್ ಒಂದು ವರ್ಷದಿಂದ ಪ್ರೀತಿಯಲ್ಲಿದ್ದರು. ಕೀರ್ತಿ ಪದವಿ ವ್ಯಾಸಂಗ ಮಾಡುತ್ತಿದ್ದಳು, ಗಂಗಾಧರ್ ತಮಟೆ ಕಲಾವಿದನಾಗಿದ್ದ ಜೊತೆಗೆ ಗಾರೆ ಕೆಲಸವನ್ನೂ ಮಾಡುತ್ತಿದ್ದ. ಗಂಗಾಧರ್ ಕೀರ್ತಿ ತಂದೆ ಕೃಷ್ಣಮೂರ್ತಿ ಬಳಿ ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿದ್ದ. ಮದುವೆ ಮಾಡಿಕೊಡಿ ಎಂದು ಮನವಿ ಮಾಡಿದ್ದ. ಆದರೆ ಇಬ್ಬರು ಬೇರೆ ಜಾತಿಯಾದ ಕಾರಣ ಕೃಷ್ಣಮೂರ್ತಿ ಮದುವೆಗೆ ಒಪ್ಪಿಗೆ ಸೂಚಿಸಲಿಲ್ಲ.
ಕೀರ್ತಿ ತಾಯಿ ಗಂಗಾಧರ್ನ್ನು ಮರೆತುಬಿಡುವಂತೆ ಕೀರ್ತಿಗೆ ಕಿವಿಮಾತು ಹೇಳಿದ್ದರು. ಆದರೆ ಕೀರ್ತಿ ಅವನನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಇದೇ ವಿಷಯವಾಗಿ ಕೀರ್ತಿ ಹಾಗೂ ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ಆಗಿದ್ದು, ಕೋಪದಲ್ಲಿ ಕೃಷ್ಣಮೂರ್ತಿ ಮಗಳ ಕತ್ತನ್ನು ಹಿಸುಕಿ ಕೊಂದಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಗಂಗಾಧರ್ ರೈಲ್ವೆ ಹಳಿ ಬಳಿ ನಿಂತಿದ್ದಾನೆ, ನೀರು ಕುಡಿದು ಬರುತ್ತೇನೆ ಎಂದು ತನ್ನ ಹೇಳಿ ಹೋದವ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಮೃತಪಟ್ಟಿದ್ದಾನೆ.