ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಭರದ ಸಿದ್ದತೆಗಳು ನಡೆಯುತ್ತಿದ್ದು, ದೇಶದ ವಿದೇಶದ ಗಣ್ಯರನ್ನು ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಲಾಗುತ್ತಿದೆ. ಇತ್ತ ಸಂತರು, ಯೋಗಿಗಳು, ಸ್ವಾಮಿಜಿಗಳು ಸೇರಿದಂತೆ ಹಲವರನ್ನು ಆಮಂತ್ರಿಸಲಾಗಿದೆ.
ಇದರ ನಡುವೆ ಶ್ರೀರಾಮನ ಪ್ರಾಣಪ್ರತಿಷ್ಠೆಯಲ್ಲಿ ಸೀತಾದೇವಿ ಹುಟ್ಟೂರಾದ ನೇಪಾಳದ ಜಾನಕಿ ಮಂದಿರದ ಅರ್ಚಕರಿಗೂ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನ ನೀಡಲಾಗಿದೆ.
ಜಾನಕಿ ಮಂದಿರದ ಮಹಾಂತರನ್ನು ರಾಮ ಮಂದಿರ ಪ್ರಾಣಪ್ರತಿಷ್ಠೆ ಆಹ್ವಾನಿಸಲಾಗಿದೆ ಎಂದು ದೇವಸ್ಥಾನದ ರಾಮ್ ರೋಶನ್ ದಾಸ್ ಹೇಳಿದ್ದಾರೆ.
ಸೀತಾದೇವಿಯ ಹುಟ್ಟೂರು ಜಾನಕಿಪುರಧಾಮದಲ್ಲಿರುವ ಜಾನಕಿ ಮಂದಿರಕ್ಕೂ ಆಯೋಧ್ಯೆಗೂ ಅವಿನಾಭ ಸಂಬಂಧವಿದೆ. ಇಷ್ಟೇ ಅಲ್ಲ ರಾಮ ಮಂದಿರ ಮೂರ್ತಿಗೆ ನೇಪಾಳದ ಗಂಡಕಿ ನದಿ ತೀರದಿಂದ ಸಾಲಿಗ್ರಾಮ ಶಿಲೆಗಳನ್ನು ಆಯೋಧ್ಯೆಗೆ ತರಲಾಗಿದೆ.
ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಜಾನಕಿ ಮಂದಿರದ ಪ್ರಧಾನ ಮಹಾಂತರು ತೆರಳುತ್ತಾರೆ. ಇದಕ್ಕಾಗಿ ತಯಾರಿ ಮಾಡಿಕೊಳ್ಳಲಾಗುತ್ತದೆ. ಐತಿಹಾಸಿಕ ಹಾಗೂ ಭವ್ಯ ಶ್ರೀರಾಮ ಮಂದಿರ ಕಣ್ತುಂಬಿಕೊಳ್ಳಲು ಕಾತರರಾಗಿದ್ದೇವೆ. ಶ್ರೀರಾಮ ಮಂದಿರ ಲೋಕಾರ್ಪಣೆಯಿಂದ ಭಾರತ ಹಾಗೂ ನೇಪಾಳದ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಧಾರ್ಮಿಕವಾಗಿ ನೇಪಾಳ ಹಾಗೂ ಭಾರತ ರಾಮಾಯಾಣ ಕಾಲಕ್ಕೂ ಮೊದಲೇ ಸಂಬಂಧ ಹೊಂದಿತ್ತು. ಇದು ಶ್ರೀರಾಮನ ಕಾಲದಲ್ಲಿ ಮತ್ತೊಂದು ಹಂತ ತಲುಪಿತ್ತು ಎಂದು ಜಾನಕಿ ಮಂದಿರದ ಉತ್ತರಾಧಿಕಾರಿ ರಾಮ್ ರೋಶನ್ ದಾಸ್ ಹೇಳಿದ್ದಾರೆ.