ದಿಗಂತ ವರದಿ ವಿಜಯಪುರ:
ಚುನಾವಣಾ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿ ಅಸ್ವಸ್ಥಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚುನಾವಣಾ ಎಪಿಆರ್’ಒ ರಮೇಶ ನಿಡಗುಂದಿ ಕರ್ತವ್ಯಕ್ಕೆ ಹಾಜರಾಗಲು ನಗರದ ಸೈನಿಕ ಶಾಲೆಗೆ ಆಗಮಿಸಿದ್ದು, ಹೈ ಶುಗರ್, ಹೈಬಿಪಿಯಿಂದ ಕುಸಿದು ಬಿದಿದ್ದಾರೆ.
ಈ ಅಧಿಕಾರಿಯನ್ನು ನಾಗಠಾಣ ವಿಧಾನಸಭಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನೇಮಿಸಲಾಗಿದ್ದು, ಸೈನಿಕ ಶಾಲೆಯ ಆರೋಗ್ಯ ತಪಾಸಣಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ನೀಡಿ, ಅಧಿಕಾರಿಯ ಆರೋಗ್ಯ ವಿಚಾರಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.