ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿದ್ದಾರೆ.
ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತರು.
ಹಿರಿಯ ನಾಗರಿಕರಿಗಾಗಿ ರೂಪಿಸಲಾಗಿರುವ ಮನೆಯಿಂದ ಮತ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು. ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಯಶೋಧಾ ಅವರು ನಿಧನರಾಗಿದ್ದಾರೆ.
ಮತದಾನಕ್ಕೂ ಮುನ್ನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ತೆರಳಲು ಅವರು ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ತೆರಳಿ ಅಲ್ಲಿ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋದಮ್ಮ ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.