ಗಲಾಟೆ ಬಿಡಿಸಲು ಹೋದ RSS ಮುಖಂಡನಿಗೆ ಚಾಕು ಇರಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಂಗಡಿ ಮುಂದೆ ಬೈಕ್ ಟಚ್ ಆಗಿದ್ದಕ್ಕೆ ಗಲಾಟೆ‌ ವೇಳೆ ನಡೆದ ಬಿಡಿಸೋದಕ್ಕೆ ಹೋದಂತ ಆರ್ ಎಸ್ ಎಸ್ ಮುಖಂಡನಿಗೆ ಚಾಕುವಿನಿಂದ ಇರಿದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ವೆಂಕಟೇಶ್ವರ ದೇವಾಲಯದ ಈ ಘಟನೆ ನಡೆದಿದ್ದು, ಇಂದು(ಶನಿವಾರ) ಮಧ್ಯಾಹ್ನ ಅಂಗಡಿ ಮುಂದೆ ಬೈಕ್ ಟಚ್ ಆಗಿದ್ದಕ್ಕೆ ಗಲಾಟೆ‌ ನಡೆದಿದೆ. ಗಲಾಟೆ ಬಿಡಿಸಲು ಹೋದ ಎಬಿವಿಪಿ ಅಧ್ಯಕ್ಷ. ರವಿ ಎನ್ನುವರಿಗೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ. ಸಧ್ಯ ಗಾಯಗೊಂಡಿರುವ ರವಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರವಿ ಮಾಲೀಕತ್ವದ ಸ್ಟೀಲ್ ಅಂಗಡಿಯ ಮುಂಭಾಗ ಇಬ್ಬರು ಗಲಾಟೆ ಮಾಡುತ್ತಿದ್ದರು. ಈ ವೇಳೆ ಗಲಾಟೆಯನ್ನು ಬಿಡಿಸಿ ಅಂಗಡಿಗೆ ವಾಪಸ್ಸಾಗುವಾಗ ಇಬ್ಬರು ಮುಸ್ಲಿಂ ಯುವಕರು ರವಿಗೆ ಚಾಕುವಿನಿಂದ ತಿವಿದಿದ್ದಾರೆ.

ಹಲ್ಲೆ ನಡೆದ ಆರೋಪಿಗಳು ಓರ್ವ ಆಟೋ ಚಾಲಕನಾಗಿದ್ದರೆ, ಮತ್ತೋರ್ವ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಈಗ ಬಂದ ಮಾಹಿತಿ ಪ್ರಕಾರ ಓರ್ವ ಆರೋಪಿಯನ್ನು ಮಾಲೂರು ಪೊಲೀಸರು ಬಂಧಿಸಿದ್ದು, ಎಸ್ಕೇಪ್ ಆಗಿರುವ ಮತ್ತೋರ್ವನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇನ್ನೂ ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಆರ್ ಎಸ್ ಎಸ್ ಕಾರ್ಯಕರ್ತರು, ಮಾಲೂರು ಬಸ್ ನಿಲ್ದಾಣದ ಎದುರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ಸಂಬಂಧ ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!