ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶ ಕಾಂಗ್ರೆಸ್ ಸ್ಟಿಯರಿಂಗ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರು ಇಂದು ರಾಜೀನಾಮೆ ನೀಡಿದ್ದಾರೆ . ಈ ಮೂಲಕ ಕಾಂಗ್ರೆಸ್ ಗೆ ಶಾಕ್ ನೀಡಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ. ಅದರಲ್ಲಿ “ಸ್ವಾಭಿಮಾನದ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗಲಾರೆ, ನನ್ನನ್ನು ಪ್ರಮುಖ ಸಭೆಗಳಿಗೆ ಆಹ್ವಾನಿಸಲಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಶರ್ಮಾ ರಾಜೀನಾಮೆ ನೀಡಿರುವುದು ಪಕ್ಷದಲ್ಲಿ ಸಂಚಲನ ಮೂಡಿದಿದೆ. ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ಅವರು ರಾಜೀನಾಮೆ ನೀಡಿದ್ದರು.