ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕಳೆದ ಆರು ತಿಂಗಳಲ್ಲಿ ಇದು ಮೂರನೇ ಬಾರಿ ಭೇಟಿಯಾಗಿದ್ದು, ಇದೀಗ ಇದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಕಳೆದ ತಿಂಗಳು ಆಂಧ್ರಪ್ರದೇಶದ ಮಾಜಿ ಸಿಎಂ, ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಅವರು ಸಹ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಆದ್ರೆ ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಆಂಧ್ರಪ್ರದೇಶದ ಈ ಎರಡು ಪಕ್ಷಗಳಲ್ಲಿ ಒಂದರ ಜೊತೆ ಬಿಜೆಪಿ ಮೈತ್ರಿ ಹೊಂದಲಿದೆ ಎಂಬ ಅಭಿಪ್ರಾಯವನ್ನು ರಾಜಕೀಯ ತಜ್ಞರು ವ್ಯಕ್ತಪಡಿಸಿದ್ದಾರೆ. ಆದರೆ, ಜಗನ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲವೆಂದು ವರದಿಗಳು ಹೇಳಿವೆ.
ಆಂಧ್ರಪ್ರದೇಶದ ಅಭಿವೃದ್ಧಿ ಹಾಗೂ ಯೋಜನೆಗಳ ಅನುಷ್ಠಾನದ ವಿಚಾರವಾಗಿ ಜಗನ್ ಅವರು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಆಗಿದ್ದಾರೆ ಎನ್ನಲಾಗುತ್ತಿದೆ.