ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೀಗ ಅವರ ಭೇಟಿ ಕುತೂಹಲ ಹೆಚ್ಚಿಸಿದ್ದು, ಎನ್ಡಿಎ ಮೈತ್ರಿಕೂಟಕ್ಕೆ ಟಿಡಿಪಿ ಸೇರ್ಪಡೆ ಬಗ್ಗೆ ವರದಿಗಳು ಹರಿದಾಡುತ್ತಿದೆ.
ಸಿಎಂ ಜಗನ್ಮೋಹನ್ ರೆಡ್ಡಿ ಅವರು ಭೇಟಿಯ ವೇಳೆ ತಿರುಪತಿ ವೆಂಕಟರಮಣನ ಫೋಟೋವನ್ನು ಪ್ರಧಾನಿಗೆ ಕಾಣಿಕೆಯಾಗಿ ನೀಡಿದರು. ಈಚೆಗಷ್ಟೇ ಆಯ್ಕೆಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನೂ ಆಂಧ್ರ ಸಿಎಂ ಭೇಟಿ ಮಾಡಲಿದ್ದಾರೆ. ಚುನಾವಣೆಯ ವೇಳೆ ಈ ಇಬ್ಬರಿಗೆ ವೈಎಸ್ಆರ್ಸಿಪಿ ಬೆಂಬಲ ನೀಡಿತ್ತು.