ಅಸಹಾಯಕನಾಗಿ ಚರಂಡಿಯಲ್ಲಿ ನಿಂತು ಪ್ರತಿಭಟಿಸಿದ ಆಂಧ್ರ ಶಾಸಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲವೆಂದು ಆಂಧ್ರಪ್ರದೇಶದ ಶಾಸಕರೊಬ್ಬರು ಕೊಚ್ಚೆ ತುಂಬಿದ್ದ ಚರಂಡಿಯಲ್ಲೇ ನಿಂತು ಪ್ರತಿಭಟಿಸಿದ್ದಾರೆ.

ಆಂಧ್ರಪ್ರದೇಶದ ನೆಲ್ಲೂರಿನ ಶಾಸಕ ವೈಎಸ್‌ಆರ್‌ಸಿಪಿ ಶಾಸಕ ಕೋಟಂರೆಡ್ಡಿ ಶ್ರೀಧರ್ ರೆಡ್ಡಿ ಅವರು ಉಮ್ಮಾರೆಡ್ಡಿ ಗುಂಟ ಪ್ರದೇಶದಲ್ಲಿ ತುಂಬಿ ಹರಿಯುತ್ತಿರುವ ಚರಂಡಿಯಲ್ಲಿ ಬರಿಗಾಲಲ್ಲಿ ನಿಂತು ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

“ಇದನ್ನು ಸ್ವಚ್ಛಗೊಳಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕಿವಿಗೊಟ್ಟಿಲ್ಲ, ಕ್ಷೇತ್ರದ ಜನತೆಗೆ ಉತ್ತರ ನೀಡುವ ಜವಾಬ್ದಾರಿ ನನ್ನ ಮೇಲಿದೆ” ಎಂದು ಕಿಡಿಕಾರಿದ್ದಾರೆ. ಇದೇ ಸಂದರ್ಭದಲ್ಲಿ ಈ ಸ್ವಚ್ಛಗೊಳಿಸುವ ಕೆಲಸ ಪೂರ್ಣಗೊಳ್ಳಲು ಎಷ್ಟುಸಮಯ ಬೇಕು ಎಂಬುದನ್ನು ಲಿಖಿತ ರೂಪದಲ್ಲಿ ಕೊಡಿ ಎಂದು ಅವರು ಆಗ್ರಹಿಸಿದರು. ಸ್ವಚ್ಛಗೊಳಿಸಲು ಅಧಿಕಾರಿಗಳು ವಿಫಲವಾದರೆ ಮತ್ತೆ ಬಂದು ಇದೇ ಚರಂಡಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಏಎನ್‌ಐ ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!