ಸುಹಾಸ್ ಹತ್ಯೆಗೆ ಭುಗಿಲೆದ್ದ ಆಕ್ರೋಶ: ಕಡಬದಲ್ಲಿ‌ ಟಯರ್ ಉರಿಸಿ ರಸ್ತೆ ತಡೆ, ಅಂಗಡಿ ಮುಂಗಟ್ಟುಗಳು ಬಂದ್

ಹೊಸದಿಗಂತ ವರದಿ ಮಂಗಳೂರು:

ಹಿಂದು ಕಾರ್ಯಕರ್ತ ಸುಹಾಸ್ ಹತ್ಯೆ ಕರಾವಳಿಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಕೃತ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಟಯರ್ ಉರಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಕಡಬ ಪೇಟೆಯಲ್ಲಿ ವರ್ತಕರು ಸ್ವಯಂ‌ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಡಬ ಶ್ರೀ ದುರ್ಗಾoಬಿಕಾ ದೇವಸ್ಥಾನ ದ ಬಳಿ ಜಮಾಯಿಸಿ ಮುಖ್ಯರಸ್ತೆಯಲ್ಲಿ ಸಾಗಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!