ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ತುಂಬಾ ಬೇಸರವಾಗಿದ್ದರು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಪವಿತ್ರಾ ಗೌಡ, ದರ್ಶನ್ ಹೆಸರು ಕೇಳಿ ಬರುತ್ತಿದ್ದಂತೆ ನಿನ್ನೆ ಇನ್ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಅನ್ಫಾಲೋ ಮಾಡಿದ್ದರು. ಅಲ್ಲದೇ ದರ್ಶನ್ ಫ್ಯಾನ್ ಪೇಜ್ ಅನ್ನು ಅನ್ಫಾಲೋ ಮಾಡಿ ಇನ್ಸ್ಟಾಗೆ ಇದ್ದ ಡಿಪಿ ಫೋಟೋವನ್ನು ತೆಗೆದು ಹಾಕಿದ್ದರು. ಇದರಿಂದ ಇನ್ಸ್ಟಾ ಖಾತೆಯ ಡಿಪಿ ಬ್ಲಾಂಕ್ನಲ್ಲಿತ್ತು. ಸದ್ಯ ಈ ಎಲ್ಲದರ ಬೆನ್ನಲ್ಲೇ ಇದೀಗ ತಮ್ಮ ಇನ್ಸ್ಟಾ ಖಾತೆಯನ್ನು ವಿಜಯಲಕ್ಷ್ಮಿ ಅವರು ಡಿ-ಆ್ಯಕ್ಟಿವೇಟ್ ಮಾಡಿದ್ದಾರೆ.