ಪ್ರಾಣಿ ಹಿಂಸೆ ಮಹಾ ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ ಸಿಕ್ಕೇ ಸಿಗುತ್ತದೆ: ಸಿಎಂ

ಹೊಸದಿಗಂತ ವರದಿ ವಿಜಯನಗರ:

ಚಾಮರಾಜಪೇಟೆಯಲ್ಲಿ ದನಗಳ ಕೆಚ್ಚಲು ಕೊಯ್ದು ಹಿಂಸೆ ಮೆರೆದಿರುವುದು ಮಹಾ ಅಪರಾಧ. ಯಾರೇ ತಪ್ಪಿತಸ್ಥರಾಗಿದ್ದರೂ, ಆದಷ್ಟು ಬೇಗ ಪತ್ತಿ ಮಾಡಿ, ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹಗರಿಬೊಮ್ಮನಹಳ್ಳಿ ತಾಲೀಕಿನ ಬಂಡಿಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಆರೋಪಗಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದರು.

ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!