ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ್ ಔಟ್: ಆ ಜಾಗಕ್ಕೆ ಈ ಹೀರೋ ಎಂಟ್ರಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕನ್ನಡ ಕಿರುತೆರೆಯ ಜೊತೆ ಜೊತೆಯಲಿ ಧಾರಾವಾಹಿಯಲ್ಲಿನ ನಟ ಅನಿರುದ್ಧ್ ಮತ್ತು ತಂಡದ ಜೊತೆಗಿನ ಕಿತ್ತಾಟ ಕೊನೆಗೆ ಅಂತ್ಯವಾಗಿದೆ. ಇದೀಗ ಜೀ ಕನ್ನಡ ವಾಹಿನಿಯಲ್ಲಿ ಪ್ರಾಸವಾಗುತ್ತಿದ್ದ ಜೊತೆ ಜೊತೆಯಲಿ ಧಾರಾವಾಹಿಗೆ ನಿರುದ್ಧ್ ಜಾಗಕ್ಕೆ ಬೇರೆ ಕಲಾವಿದರ ಹೆಸರು ಕೇಳಿಬರುತ್ತಿದೆ.
ನಟ ಅನಿರುದ್ಧ್ ಕಿರಿಕ್ ಮಾಡಿಕೊಂಡ ಹಿನ್ನಲ್ಲೆ ಅನಿರುದ್ಧ್ ಅವರನ್ನು ಕಿರುತೆರೆಯಿಂದನೇ ಎರಡು ವರ್ಷಗಳ ಕಾಲ ಧಾರಾವಾಹಿಯಿಂದ ದೂರ ಇಡಲು ನಿರ್ಮಾಪಕರ ಸಂಘ ನಿರ್ಧರಿಸಿದೆ. ಈ ಬಗ್ಗೆ ಜೊತೆ ಜೊತೆಯಲಿ ಧಾರಾವಾಹಿಯ ನಿರ್ಮಾಪಕ ಆರೂರು ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಧಾರಾವಾಹಿಯಿಂದ ಅನಿರುದ್ಧ ಹೊರಬಿದ್ದ ಬಳಿಕ ಅವರ ಜಾಗಕ್ಕೆ ಎಂಟ್ರಿ ಕೊಡುವ ನಟ ಯಾರು ಎನ್ನುವ ಚರ್ಚೆ ಪ್ರಾರಂವಾಗಿದೆ. ಈಗಾಗಲೇ ಸಾಕಷ್ಟು ನಟರ ಹೆಸರು ಕೇಳಿಬಂದಿದೆ. ವಿಜಯ್ ರಾಘವೇಂದ್ರ, ಜೆಕೆ, ಹರೀಶ್ ರಾಜ್, ನವೀನ್ ಕೃಷ್ಣ ಹೀಗೆ ಅನೇಕರ ಹೆಸರು ಆರ್ಯವರ್ಧನ್ ಪಾತ್ರಕ್ಕೆ ಕೇಳಿಬರುತ್ತಿತ್ತು. ಆದರೀಗ ಮತ್ತಷ್ಟು ಹೆಸರು ವೈರಲ್ ಆಗಿದೆ. ಅದು ಮತ್ಯಾರು ಅಲ್ಲ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ.

ಆರ್ಯವರ್ಧನ್ ಪಾತ್ರದಲ್ಲಿ ಅನೂಪ್ ಭಂಡಾರಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಬಲವಾಗಿ ಕೇಳಿಬರುತ್ತಿದೆ. ಒಂದು ವೇಳೆ ಅನೂಪ್ ಭಂಡಾರಿ ಆರ್ಯವರ್ಧನ್ ಆಗಿ ಬಣ್ಣ ಹಚ್ಚಿದರೆ ಮೊದಲ ಬಾರಿಗೆ ನಟನಾಗಿ ಕಿತುತೆರೆಯಲ್ಲಿ ಮಿಂಚಲಿದ್ದಾರೆ.
ಈ ಬಗ್ಗೆ ಧಾರಾವಾಹಿ ಕಡೆಯಿಂದ ಅಥವಾ ವಾಹಿನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಆದರೆ ಅನೂಪ್ ಹೆಸರು ಬಲವಾಗಿ ಕೇಳಿಬರುತ್ತಿರುವ ಕಾರಣ ಅನೂಪ್ ಭಂಡಾರಿ ಆರ್ಯವರ್ಧನ್ ಆಗಿ ಕಿರುತೆರೆ ಅಭಿಮಾನಿಗಳ ಮುಂದೆ ಬರುವ ಸಾಧ್ಯತೆ ಇದೆ.
ಸದ್ಯ ಅನೂಪ್ ಭಂಡಾರಿ ವಿಕ್ರಾಂತ್ ರೋಣ ಸಿನಿಮಾ ಸಕ್ಸಸ್ ನಲ್ಲಿದ್ದಾರೆ. ಈ ಸಿನಿಮಾ ಬಳಿಕ ಇನ್ನು ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!