ಹೊಸದಿಗಂತ ವರದಿ, ಕುಶಾಲನಗರ:
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯಿಂದ ಪ್ರತಿನಿಧಿಸಿದ್ದ ಅನಿಷಾ ಎಚ್.ದೇವಾಡಿಗ ಅವರು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕುಶಾಲನಗರ ಸಮೀಪದ ಬೊಳ್ಳೂರು ಗುಡ್ಡೆಹೊಸೂರು ಉದ್ಗಮ್ ವಿದ್ಯಾಸಂಸ್ಥೆಯ 6ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಅನಿಷಾ, ಕುಶಾಲನಗರದ ಚೈತ್ರಾ ಹಾಗೂ ಹರೀಶ್ ದೇವಾಡಿಗ ದಂಪತಿಯ ಪುತ್ರಿ.