ಅಂಕೋಲ: ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಹೊಸದಿಗಂತ ವರದಿ, ಅಂಕೋಲಾ:
ಕದಂಬ ನೌಕಾನೆಲೆಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಗೌರಪೂರ್ವಕವಾಗಿ ಸ್ವಾಗತ ಕೋರಿದರು.
ಅಂಕೋಲಾ ತಾಲೂಕಿನ ಅಲಗೇರಿ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಯೋಜನೆಯಿಂದ ನಿರಾಶ್ರಿತರಾದವರಿಗೆ ಹೆಚ್ಚಿನ ಪರಿಹಾರ, ಪುನರ್ವಸತಿ, ಉದ್ಯೋಗ ಮತ್ತಿತರ ಸೌಕರ್ಯಗಳನ್ನು ಒದಗಿಸಲು ಶಾಸಕಿ ರೂಪಾಲಿ ನಾಯ್ಕ ಅವರು ಕೇಂದ್ರ ರಕ್ಷಣಾ ಸಚಿವರಲ್ಲಿ ಮನವಿ ಮಾಡಿದರು.
ನೌಕಾನೆಲೆ ಯೋಜನೆಗೆ ತ್ಯಾಗ ಮಾಡಿದ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ಥರು ಎಂದು ಘೋಷಿಸಿ ಅವರ ಕುಟುಂಬಕ್ಕೆ ಒಂದು ಉದ್ಯೋಗ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಒದಗಿಸಲು ಶಿಫ್ ಯಾರ್ಡ್ ನಿರ್ಮಿಸಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!