ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಫೀನಿಕ್ಸ್ ಮಹಾನಗರದಲ್ಲಿರುವಅ ಉಡುಪಿಯ ಪುತ್ತಿಗೆ ಮಠದ ಶ್ರೀ ಕೃಷ್ಣ ಮಂದಿರದಲ್ಲಿ ಪ್ರಧಾನಿ ಮೋದಿ ಹೆಸರಲ್ಲಿ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಪಹಲ್ಗಾಮ್ ಘಟನೆ ನಂತರ ದೇಶದ ಸೈನ್ಯಕ್ಕೆ ಶಕ್ತಿ ತುಂಬಲು ಪ್ರಾರ್ಥನೆ ಮಾಡಿದ್ದಾರೆ. ಅಣ್ಣಾಮಲೈ ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳಿದ್ದರು. ಈ ವೇಳೆ ಕಾರ್ಯಕ್ರಮ ಸಂಯೋಜಕರ ಬಳಿ ಮಾಹಿತಿ ಪಡೆದು ಕೃಷ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಭೇಟಿ ವೇಳೆ ದೇವಾಲಯದ ವಾಸ್ತುಶಿಲ್ಪ ಹಾಗೂ ಪೂಜಾ ಶೈಲಿಯನ್ನು ಅಣ್ಣಾಮಲೈ ಕೊಂಡಾಡಿದ್ದಾರೆ. ಈ ಸಂದರ್ಭ ನೂರಾರು ಭಾರತೀಯರು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದಾರೆ.