ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು- ವಿಟ್ಲ ಘಟಕದ 4ನೇ ವಾರ್ಷಿಕೋತ್ಸವವು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಹವ್ಯಾಸಿ ಯಕ್ಷಗಾನ ಕಲಾವಿದೆ ಜಯಲಕ್ಷ್ಮಿ ರೈ ಅಡ್ಯನಡ್ಕ ಮತ್ತು ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಖ್ಯಾತಿಯ ಬಹುಮುಖ ಪ್ರತಿಭೆ ರಿಷಿತ್ ರಾಜ್ ವಿಟ್ಲ ಅವರನ್ನು ಸನ್ಮಾನಿಸಲಾಯಿತು.
ಸ್ಥಾಪಕಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ , ಗೌರವಾಧ್ಯಕ್ಷರಾದ ವಿಟ್ಲ ಅರಮನೆಯ ಕೃಷ್ಣಯ್ಯ ಅರಸರು, ಮಾರಪ್ಪ ಶೆಟ್ಟಿ ಬೈಲುಗುತ್ತು, ಮಾಧವ ಮಾವೆ, ಮೋಹನದಾಸ ರೈ ಎರುಂಬು, ಸಂತೋಷ್ ಶೆಟ್ಟಿ ಪೆಲತ್ತಡ್ಕ ಉಪಸ್ಥಿತರಿದ್ದರು.
ವಿಟ್ಲ ಘಟಕದ ಅಧ್ಯಕ್ಷರು ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಇವರು ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅಳಕೆ ಇವರು ಪ್ರಸ್ತಾವಿಸಿದರು. ಸುರೇಶ್ ಶೆಟ್ಟಿ ಪಡಿಬಾಗಿಲು ನಿರೂಪಿಸಿ ವಿಜಯಶಂಕರ ಆಳ್ವರು ವಂದಿಸಿದರು.