ರಾಜ್ಯದ ಒಂದು ಮತಗಟ್ಟೆಯಲ್ಲಿ ಮರುಮತದಾನ ಘೋಷಣೆ, ಏ.29ರಂದು ಚುನಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮರುಮತದಾನ ಘೋಷಣೆಯಾಗಿದೆ. ಮರುಮತದಾನವು ಸೋಮವಾರ, ಏಪ್ರಿಲ್ 29 ರಂದು ಬೂತ್ ನಂ.146 ರಲ್ಲಿ ನಡೆಯಲಿದೆ.

ಎಪ್ರಿಲ್ 29 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಮತಗಟ್ಟೆ ಸಂ. 146 ರಲ್ಲಿ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆಯಲಿದೆ.

ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು, ಮತಗಟ್ಟೆಗೆ ದಾಳಿ ನಡೆಸಿ ಇವಿಎಂ ಹಾಗೂ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದಾಗಿ ಇಂಡಿಗನತ್ತ ಮತಗಟ್ಟೆಯಲ್ಲಿ ಮೊದಲ ಹಂತದ ಮತದಾನದ ದಿನವಾದ ಏ.26ರಂದು ಮತದಾನ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಏ.29ರಂದು ಮರುಮತದಾನ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!