ಭಾರತದಿಂದ ಗಗನಯಾನ ಕೈಗೊಳ್ಳಲಿರುವ ನಾಲ್ವರ ಹೆಸರು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೋ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾದ ನಾಲ್ವರು ಗಗನಯಾತ್ರಿಗಳ ಹೆಸರನ್ನು ಘೋಷಿಸಲಾಗಿದೆ.

ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾದ ಕ್ಯಾಪ್ಟನ್ ಪ್ರಶಾಂತ್ ನಾಯರ್, ಕ್ಯಾಪ್ಟನ್ ಅಜಿತ್ ಕೃಷ್ಣನ್, ಕ್ಯಾಪ್ಟನ್ ಅಂಗದ್ ಪ್ರತಾಪ್ ಹಾಗೂ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ.

ಕೇರಳದ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ನಾಲ್ವರ ಹೆಸರನ್ನು ಘೋಷಣೆ ಮಾಡಲಾಗಿದೆ. 2025 ರಲ್ಲಿ ಇಸ್ರೋ ತನ್ನ ಮಹತ್ವಾಕಾಂಕ್ಷಿ ಗಗನಯಾನ ನಡೆಸುವ ನಿರೀಕ್ಷೆ ಇದ್ದು, ಈ ಬಾಹ್ಯಾಕಾಶ ನೌಕೆಯಲ್ಲಿ ಏಳು ದಿನ ಪ್ರಯಾಣ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!