ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: 24ನೇ ಆರೋಪಿ ಮಂಜುನಾಥ್ ಮೇಳಕುಂದಿ ಶರಣಾಗತಿ

ಹೊಸದಿಗಂತ ವರದಿ ಕಲಬುರಗಿ: 

‌ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಕ್ರಮದ ಇನ್ನೋರ್ವ ಪ್ರಮುಖ ಆರೋಪಿ ಕಿಂಗ್ ಪಿನ್ ಆಗಿರುವ ಮಂಜುನಾಥ್ ಮೇಳಕುಂದಿ ಭಾನುವಾರ ಖುದ್ದಾಗಿ ಸಿಐಡಿ ಮುಂದೆ ಶರಣಾಗಿದ್ದಾನೆ.

ನಗರದ ಐವನ್ ಶಾಹಿ ಅತಿಥಿ ಗೃಹದಲ್ಲಿನ ಸಿಐಡಿ ಕಚೇರಿಗೆ ಖುದ್ದಾಗಿ ಆಟೋದಲ್ಲಿ ಬಂದು ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಮಂಜುನಾಥ್ ಮೇಳಕುಂದಿ ತನ್ನನ್ನು ತಾನು ಸಿಐಡಿಗೆ ಒಪ್ಪಿಸಿಕೊಂಡಿದ್ದಾನೆ.

ಅಕ್ರಮದಲ್ಲಿ ನನ್ನದೇನೂ ತಪ್ಪಿಲ್ಲ. ಸುಮ್ಮನೆ ಪ್ರಕರಣದಲ್ಲಿ ಸಿಲುಕಿ ಹಾಕಿಸುವುದಕ್ಕೆ ಮುಂದಾಗಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!