ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದರ ಮೇಲೊಂದು ಹಿನ್ನಡೆಯಾಗುತ್ತಿದ್ದು, ಪ್ರಮುಖ ನಾಯಕರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.
ಇದೀಗ ನಾಲ್ಕು ಬಾರಿಯ ಕಾಂಗ್ರೆಸ್ ಶಾಸಕ, ರಾಜಸ್ಥಾನದ ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವಿಯಾ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಮಾಳವಿಯಾ ಅವರನ್ನು ಬಿಜೆಪಿ ರಾಜಸ್ಥಾನ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಮುಖ್ಯಸ್ಥ ಸಿಪಿ ಜೋಶಿ ಮತ್ತು ಇತರ ನಾಯಕರು ಪಕ್ಷಕ್ಕೆ ಸ್ವಾಗತಿಸಿದರು.
ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಮಹೇಂದ್ರಜೀತ್ ಮಾಳವಿಯಾ, ವಾಗಡ್ ಪ್ರದೇಶದ ಅಭಿವೃದ್ಧಿಯ ಏಕೈಕ ಕಾರಣದಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಕಾಂಗ್ರೆಸ್ಗೆ ದೂರದೃಷ್ಟಿ ಇಲ್ಲ. ಬಿಜೆಪಿ ಸೇರಿದ ನಂತರ ನಾನು ಇನ್ನೂ ಕಾಂಗ್ರೆಸ್ ಶಾಸಕನಾಗಿ ಉಳಿಯುವುದು ಹೇಗೆ? ಎಂದರು.