ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನದ ಕೂಗು: ರಾಜಸ್ಥಾನ ಉಸ್ತುವಾರಿ ಹುದ್ದೆ ತೊರೆದ ಮಾಕೇನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕಾಂಗ್ರೆಸ್ ನಲ್ಲಿ ಎಲ್ಲವು ಸರಿಯಿಲ್ಲ ಎಂಬ ಮಾತು ಹಲವು ಬಾರಿ ಮುನ್ನೆಲೆಗೆ ಬರುತ್ತಿರುದ್ದು, ಇದೀಗ ಮತ್ತೆ ಅಸಮಾಧಾನ ಮುಗಿಲೆದ್ದಿದೆ.

ರಾಜಸ್ಥಾನ ಉಸ್ತುವಾರಿ ಜವಾಬ್ದಾರಿಯಿಂದ ನಾಯಕ ಅಜಯ್ ಮಾಕೇನ್ ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಅವರು ಒಂದು ಪುಟದ ಪತ್ರವನ್ನು ಬರೆದು ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಸಂಬಂಧ ಸೆಪ್ಟೆಂಬರ್ 25ರಂದು ನಡೆದ ರಾಜಸ್ಥಾನದಲ್ಲಿ ನಡೆದ ಬೆಳವಣಿಗೆ ಸಂಬಂಧ ಕ್ರಮ ಕೈಗೊಳ್ಳಲು ಪಕ್ಷ ವಿಫಲವಾಗಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!