ದಿಗಂತ ವರದಿ ವಿಜಯಪುರ:
ಆಟವಾಡುವ ವೇಳೆ ಬಾಲಕನೊಬ್ಬ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಇಲ್ಲಿನ ಖುಷಾಲ್ ವೀರೇಶ ಹಾಲ್ಯಾಳ (6) ಮೃತಪಟ್ಟ ಬಾಲಕ. ಖುಷಾಲ್ ಹಾಲ್ಯಾಳ ಬಾಲಕ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದು ಅಸುನೀಗಿದ್ದಾನೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.